masthmagaa.com:
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವ್ರನ್ನ ಭ್ರಷ್ಟಾಚಾರ ಕೇಸ್ಗೆ ಸಂಬಂಧಿಸಿದಂತೆ ನಿನ್ನೆ ಸಿಐಡಿ ಪೊಲೀಸರು ಬಂಧಿಸಿದ್ದರು. ಈ ಬಂಧನವನ್ನ ಖಂಡಿಸಿ ನಾಯ್ಡು ಅವ್ರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಜನಸೇನಾ ಪಕ್ಷದ ನಾಯಕ ಹಾಗೂ ನಟ ಪವನ್ ಕಲ್ಯಾಣ್ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವನ್ ಕಲ್ಯಾಣ್ರನ್ನ ಪೊಲಿಸರು ತಡೆದಿದ್ದು, ಆಗ ಪವನ್ ರಸ್ತೆ ಮೇಲೆ ಮಲಗಿಕೊಂಡು ಪ್ರತಿಭಟಿಸಿದ್ದಾರೆ. ಬಳಿಕ ಪವನ್ರನ್ನ ವಿಜಯವಾಡಕ್ಕೆ ಸ್ಥಳಾಂತರಿಸುತ್ತಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಅಂತ ಪೊಲೀಸರು ತಿಳಿಸಿದ್ದಾರೆ.
-masthmagaa.com
Contact Us for Advertisement