‘ಸುಶಾಂತ್​ ಸಿಂಗ್​ದು ಆತ್ಮಹತ್ಯೆಯಲ್ಲ ಕೊಲೆ’ ಎಂದ ಮೋದಿ ಸಂಪುಟದ ಸಚಿವ!

masthmagaa.com:

ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್​ ಅವರದ್ದು ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಅಂತ ಕೇಂದ್ರ ಸಚಿವ ರಾಮ್​ದಾಸ್ ಅಠಾವಳೆ ಹೇಳಿದ್ದಾರೆ. ಹರಿಯಾಣದ ಫರಿದಾಬಾದ್​ನಲ್ಲಿ ಸುಶಾಂತ್ ಅವರ ತಂದೆ ಕೆ.ಕೆ. ಸಿಂಗ್ ಮತ್ತು ಸಹೋದರಿ ರಾಣಿ ಸಿಂಗ್ ಭೇಟಿಯಾದ ಬಳಿಕ ಸಚಿವರು ಈ ಹೇಳಿಕೆ ಕೊಟ್ಟಿದ್ದಾರೆ.

‘ಸುಶಾಂತ್ ಅವರ ಸಾವು ಆತ್ಮಹತ್ಯೆಯಿಂದ ಸಂಭವಿಸಿದ್ದಲ್ಲ. ಅದೊಂದು ಕೊಲೆ ಅನ್ನೋದು ನನ್ನ ಅನಿಸಿಕೆ. ಅವರ ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದೆ. ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಡೆಯುತ್ತಿರುವ ಸಿಬಿಐ ತನಿಖೆ ಬಗ್ಗೆ ಕುಟುಂಬಸ್ಥರು ತೃಪ್ತರಾಗಿದ್ದಾರೆ’ ಅಂತ ರಾಮ್​ದಾಸ್ ಅಠಾವಳೆ ಹೇಳಿದ್ದಾರೆ.

ಈ ಪ್ರಕರಣವನ್ನು ಮುಚ್ಚಿ ಹಾಕಲು ಮಹಾರಾಷ್ಟ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಮೋದಿ ಸಂಪುಟದ ಸಚಿವರೊಬ್ಬರು ಈ ರೀತಿ ಹೇಳಿಕೆ ಕೊಟ್ಟಿರೋದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸದ್ಯ ಕೇಂದ್ರದ ಮೂರು ತನಿಖಾ ಸಂಸ್ಥೆಗಳಾದ CBI, ED ಮತ್ತು NCB ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ.

-masthmagaa.com

Contact Us for Advertisement

Leave a Reply