masthmagaa.com:
ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಕುರಿತ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿಕೆಯನ್ನು ವಿಧಾನಪರಿಷತ್ ಸದಸ್ಯ ರವಿಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಎಮ್ಮೆ, ಕೋಣಗಳನ್ನು ಕಡಿಬೋದಾದ್ರೆ ಹಸು ಏಕೆ ಕಡಿಯಬಾರದು? ಅನ್ನೊ ಹೇಳಿಕೆಗೆ ತಿರುಗೇಟು ನೀಡಿರುವ ರವಿಕುಮಾರ್, ‘ಗೋಹತ್ಯೆ ನಿಷೇಧ ಕಾನೂನು ವಾಪಸ್ ಪಡೆದರೆ ರಾಜ್ಯಾದ್ಯಂತ ಹೋರಾಟದ ಅಭಿಯಾನ ಕೈಗೊಳ್ಳಲಾಗುವುದು’ ಅಂತ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡೋಕೆ ಮುಂದಾದರೆ ರಾಜ್ಯದಲ್ಲಿ ಇನ್ನೆಂದೂ ಕಾಣದ ರೀತಿಯಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಈ ಎಚ್ಚರಿಕೆಯನ್ನ ಸಚಿವರಿಗೆ ಮತ್ತು ಸರ್ಕಾರಕ್ಕೆ ನೀಡುತ್ತಿದ್ದೇವೆ ಅಂತ ತಿಳಿಸಿದ್ದಾರೆ. ಇತ್ತ ಸಚಿವ ವೆಂಕಟೇಶ್ ಅವ್ರ ಹಸುವನ್ನ ಯಾಕೆ ಕಡಿಬಾರ್ದು ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯರಾದ ಗೋವಿನೊಂದಿಗೆ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಆದ್ರೆ ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಅಂತನಾ ಅಥ್ವಾ ಹೈಕಮಾಂಡ್ ಮೆಚ್ಚಿಸೋದಕ್ಕಾಗಿನಾ? ಅಂತ ಪ್ರಶ್ನಿಸಿದ್ದಾರೆ.
-masthmagaa.com
Contact Us for Advertisement