masthmagaa.com:
ಉತ್ತರ ಪ್ರದೇಶ: ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಸಾಧುಗಳ ಹತ್ಯೆ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ಅಂತಹದ್ದೇ ಘಟನೆ ವರದಿಯಾಗಿದೆ. ಬುಲಂದ್ ಶಹರ್ ಜಿಲ್ಲೆಯ ಅನೂಪ್ಶಹರ್ನ ಪಗೋನಾ ಗ್ರಾಮದಲ್ಲಿ ಇಬ್ಬರು ಸಾಧುಗಳನ್ನು ಹತ್ಯೆ ಮಾಡಲಾಗಿದೆ. ದೇವಸ್ಥಾನದಲ್ಲಿ ಮಲಗಿದ್ದಾಗ ಬಂದ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾನೆ. ಆದ್ರೆ ಗ್ರಾಮಸ್ಥರು ಆರೋಪಿಯನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಗ್ರಾಮದಲ್ಲಿ ಒಂದು ಶಿವ ಮಂದಿರವಿದ್ದು, 55 ವರ್ಷದ ಸಾಧು ಜಗನ್ದಾಸ್ ಮತ್ತು 35 ವರ್ಷದ ಸಾಧು ಸೇವಾದಾಸ್ ಇಲ್ಲಿ ವಾಸವಾಗಿದ್ದರು. ಆದ್ರೆ ನಿನ್ನೆ ರಾತ್ರಿ ಇವರನ್ನು ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ಸಾಧುಗಳ ಹತ್ಯೆಯಾಗಿರೋದನ್ನು ಗಮನಿಸಿದ ಗ್ರಾಮಸ್ಥರು, ಉದ್ರಿಕ್ತರಾಗಿದ್ದಾರೆ. ಈ ವೇಳೆ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಜನರಿಗೆ ಅನುಮಾನ ಬಂದಿದ್ದು, ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ.
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರು ಚಾಲಕನನ್ನು ಹತ್ಯೆ ಮಾಡಲಾಗಿತ್ತು. ಮಕ್ಕಳನ್ನು ಅಪಹರಿಸಿ ಕಿಡ್ನಿ ಮಾರುತ್ತಾರೆ ಅನ್ನೋ ವದಂತಿ ಹಿನ್ನೆಲೆ ಗಡ್ಚಿಂಚಲೆ ಗ್ರಾಮಸ್ಥರು ಈ ಕೃತ್ಯ ಎಸಗಿದ್ದರು.
-masthmagaa.com
Contact Us for Advertisement