ಹುಲಿ ಉಗುರಿನ ಲಾಕೆಟ್‌: ವರ್ತೂರ್‌ ಸಂತೋಷ್‌ಗೆ ಜಾಮೀನು

masthmagaa.com:

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್​ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಷ್ಟು ದಿನ ನ್ಯಾಯಾಂಗ ಬಂಧನದಲ್ಲಿದ್ದ ಸಂತೋಷ್‌ಗೆ ಜಾಮೀನು ಸಿಕ್ಕಿದ್ದು, ಇಂದು ಬಿಡುಗಡೆಗೊಳಿಸಲಾಗಿದೆ. ಇತ್ತ ಸಂತೋಷ್‌ ಅವರ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗರಿನ ಸದ್ದು ಜೋರಾಗಿದ್ದು, ಹಲವರಿಗೆ ತಲೆನೋವು ಶುರುವಾಗಿದೆ. ಕನ್ನಡ ಚಿತ್ರರಂಗದ ಪ್ರಮುಖರು, ರಾಜಕಾರಣಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿ ಬಂದಿದೆ. ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ (DRFO) ದರ್ಶನ್ ಅನ್ನೋರ ವಿರುದ್ಧ ದೂರು ದಾಖಲಾಗಿತ್ತು. ಈಗ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇನ್ನೊಂದ್‌ ಕಡೆ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ ಹಜರತ್ ಸೈಯದ್ ಗೌತ್ ಮೊಹಿದ್ದೀನ್ ವಿರುದ್ಧ ಅಕ್ರಮವಾಗಿ ಹುಲಿ‌ ಚರ್ಮ ಮನೆಯಲ್ಲಿ ಇಟ್ಕೊಂಡಿರೋ ಗಂಭೀರ ಆರೋಪ ಕೇಳಿ ಬಂದಿದೆ . ಹಿಂದೂ ಸಂಘಟನೆಯ ಕಾರ್ಯಕರ್ತರು ಶಾಖಾದ್ರಿ ವಿರುದ್ಧ ಆರೋಪ ಮಾಡಿದ್ದು, ಚಿಕ್ಕಮಗಳೂರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಖಾದ್ರಿಯವರಿಗೆ ನೋಟಿಸ್‌ ನೀಡಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply