ರಾಜ್ಯಾದ್ಯಂತ ಅಬ್ಬರಿಸಿದ ವರುಣ! ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

masthmagaa.com:

ರಾಜ್ಯದಲ್ಲಿ ಸುರೀತಿರೋ ಅಬ್ಬರದ ಮಳೆ ಇವತ್ತೂ ಕಡಿಮೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಎಂಬಲ್ಲಿ ಅತಿಹೆಚ್ಚು 191.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಅತ್ಯಧಿಕ ಮಳೆ ಇನ್ನುಳಿದ ಕೆಲವು ಭಾಗಗಳಲ್ಲಿ ಭಾರಿ ಅಂದ್ರೆ ಭಾರಿ ಮಳೆಯಾಗಲಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹಾಸನ, ಶಿವಮೊಗ್ಗ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಬಳ್ಳಾರಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ‌, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ರಾಜ್ಯದಲ್ಲಿ ಅತಿವೃಷ್ಠಿಯಿಂದ ಉಂಟಾಗಿರೋ ಅನಾಹುತಗಳಿಗೆ ಪರಿಹಾರವಾಗಿ 500 ಕೋಟಿ ತುರ್ತುಘೋಷಣೆ ಮಾಡಲಾಗಿದೆ ಅಂತ ಸಿಎಂ ಬಸವರಾಜಬೊಮ್ಮಾಯಿ ಹೇಳಿದ್ದಾರೆ. ಇತ್ತ ಪಕ್ಕದ ಕೇರಳದಲ್ಲೂ ಭಾರಿ ಮಳೆಯ ಮುನ್ಸೂಚನೆ ಇದ್ದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಕಟ್ಟೆಚ್ಚರ ಸಾರಲಾಗಿದೆ.

-masthmagaa.com

Contact Us for Advertisement

Leave a Reply