masthmagaa.com:
ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡ್ತಿರೋದನ್ನ ಖಂಡಿಸಿ ಮಂಡ್ಯ, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆದಿದೆ. ಇತ್ತ ಅಕ್ಟೋಬರ್16ಕ್ಕೆ ಕರಾಳ ದಿನ ಆಚರಿಸಲಾಗುತ್ತೆ ಅಂತ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಕಾವೇರಿ ಪ್ರಾಧಿಕಾರದ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ಮಾಡ್ತೇವೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಕಪ್ಪು ಬಾವುಟ ಪ್ರದರ್ಶನ ಮಾಡ್ತೇವೆ ಅಂತ ನಾಗರಾಜ್ ತಿಳಿಸಿದ್ದಾರೆ.
-masthmagaa.com
Contact Us for Advertisement