ವೀರಶೈವ ಲಿಂಗಾಯತ ಮಹಾಸಭಾ ಮಹಾ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌!

masthmagaa.com:

ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗ್ತಿದೆ ಅನ್ನೋ ಚರ್ಚೆಗಳು ಸಾಕಷ್ಟು ಸುದ್ಧಿ ಮಾಡಿತ್ತು. ಇದರ ಬೆನ್ನಲ್ಲೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನವನ್ನ ದಾವಣಗೆರೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಅಂತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅನೌನ್ಸ್‌ ಮಾಡಿದ್ದಾರೆ. ದಾವಣಗೆರೆಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಈ ಮಹಾ ಅಧಿವೇಶನ ಡಿಸೆಂಬರ್‌ 23 ಮತ್ತು 24ರಂದು ನಡೆಯಲಿದೆ ಅಂತ ತಿಳಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ. ಈ ಸಂಬಂಧ, ನೀವ್ ಕರ್ಕೊಂಡು ಬಂದಿದ್ದು, ಈವಾಗ ನೀವೇ ಸರಿಪಡಿಸಿ ಅನ್ನೋ ರೀತಿಯಲ್ಲಿ ಬಿಎಸ್‌ವೈ ಹೆಗಲಿಗೆ ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಹೊರಿಸಲಾಗಿದೆ.

-masthmagaa.com

Contact Us for Advertisement

Leave a Reply