ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸೆ: ರೋಡಿಗಿಳಿದ ಆಡಳಿತ ಪಕ್ಷದ ಕಾರ್ಯಕರ್ತರು!

masthmagaa.com:

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ಧಾರ್ಮಿಕ ಹಿಂಸಾಚಾರವನ್ನ ಖಂಡಿಸಿ ಅಲ್ಲಿನ ಆಡಳಿತ ಪಕ್ಷದ ಸಾವಿರಾರು ಕಾರ್ಯಕರ್ತರು ಇವತ್ತು ರೋಡಿಗಳಿದು ಮೆರವಣಿಗೆ ಮಾಡಿದ್ದಾರೆ. ಈ ಮೂಲಕ ಅಲ್ಲಿ ಅಲ್ಪಸಂಖ್ಯಾತರಾಗಿರೋ ಹಿಂದೂಗಳಿಗೆ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಕಾರ್ಯಕರ್ತರು ನಡೆಸಿದ ಈ ಮೆರವಣಿಗೆ ವೇಳೆ ಹಿಂಸಾಚಾರಕ್ಕೆ ಅಂತ್ಯ ಹಾಡುವಂತೆ ಕರೆ ಕೊಟ್ಟಿದ್ದಾರೆ. ಅಂದ್ಹಾಗೆ ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಹಿಂದೂ ಸೇರಿದಂತೆ ಆರು ಜನ ಮೃತಪಟ್ಟಿದ್ದರು. ಹಲವರ ಮನೆಗಳನ್ನ ಧ್ವಂಸ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇದುವರೆಗೆ 450ಕ್ಕೂ ಹೆಚ್ಚು ಜನರನ್ನ ಅರೆಸ್ಟ್ ಮಾಡಿರೋದಾಗಿ ಪೊಲೀಸರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply