masthmagaa.com:
ಕೊರೋನ ಸಮಯದಲ್ಲಿ ಸಂಕಷ್ಟಕ್ಕೆ ತುತ್ತಾಗಿದ್ದ, ಕರ್ನಾಟಕ ಚಲನಚಿತ್ರ ಸಹ ಕಲಾವಿದರಿಗೆ ನಿರ್ಮಾಪಕ ವಿಜಯ್ ಕಿರಂಗದೂರು ನೆರವಾಗಿದ್ದಾರೆ. ಕರ್ನಾಟಕ ಚಲನಚಿತ್ರ ಸಹ ಕಲಾವಿದರ ಹಾಗೂ ಪ್ರತಿನಿಧಿಗಳ ಸಂಘಕ್ಕೆ ನಾಲ್ಕು ಲಕ್ಷ ರೂಪಾಯಿ ಸಹಾಯ ಮಾಡಿದ್ದಾರೆ.
ಈ ಹಣದಿಂದ ಸುಮರು 600 ಜನರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು ಹಾಗೂ ಸಾರಿಗೆ ಭತ್ಯೆಯಂದು ಎರಡುನೂರು ರೂಪಾಯಿ ನೀಡಲಾಯಿತು ಎಂದು ಕರ್ನಾಟಕ ಸಹ ಕಲಾವಿದರ ಸಂಘದ ಖಜಾಂಚಿ ದಿವಾಕರ್ ಆರಗ ತಿಳಿಸಿದ್ದಾರೆ.
ನಮ್ಮ ಸಂಘದ ಸದಸ್ಯರ ಸಂಕಷ್ಟಕ್ಕೆ ಮಿಡಿದ ವಿಜಯ್ ಕಿರಂಗದೂರು ಅವರಿಗೆ ಹಾಗೂ ಸಹಕಾರ ನೀಡಿದ್ದ
ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದು, ಕಾರ್ಯದರ್ಶಿ ರವೀಂದ್ರನಾಥ್ ಹಾಗೂ ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಅವರಿಗೆ ಸಂಫದ ಎಲ್ಲಾ ಸದಸ್ಯರ ಪರವಾಗಿ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ ದಿವಾಕರ್ ಆರಗ.
-masthmagaa.com
Contact Us for Advertisement