masthmagaa.com:
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಲ್ಪಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದಾರೆ. ʻಅಲ್ಪಸಂಖ್ಯಾತ ಮಹಿಳೆ ಮೇಲೆ ದೌರ್ಜನ್ಯ ನಡೆದಿದೆ. ಆದ್ರೆ ಈ ಕೇಸನ್ನ ಮುಚ್ಚಾಕೋದ್ರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ವಿಚಾರದಲ್ಲಿ ರಾಜಕೀಯ ಮಾಡ್ಬಾರ್ದು. ಅಲ್ಪಸಂಖ್ಯಾತ ಮಹಿಳೆಗೆ ರಕ್ಷಣೆ ಇಲ್ಲ ಅಂದ್ಮೇಲೆ ಸರ್ಕಾರ ಯಾಕ್ ಇರ್ಬೇಕು ಅಂತ ವಾಗ್ದಾಳಿ ನಡೆಸಿದ್ದಾರೆ. ಅಂದ್ಹಾಗೆ ಹಾನಗಲ್ನಲ್ಲಿ ಅನ್ಯ ಧರ್ಮೀಯ ವ್ಯಕ್ತಿ ಜೊತೆ ಇದ್ದ ಕಾರಣಕ್ಕೆ ಯುವತಿ ಮೇಲೆ 7 ಜನ ಯುವಕರು ನೈತಿಕ ಪೊಲೀಸ್ಗಿರಿ ತೋರಿಸಿದ್ರು. ನಂತರ ಯುವತಿ ನೀಡಿದ ಹೇಳಿಕೆ ಆಧಾರದ ಮೇಲೆ ಪೊಲೀಸರು 7 ಯುವಕರ ವಿರುದ್ಧ ಸಾಮೂಹಿಕ ಅತ್ಯಾಚಾರ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಈ ಕೇಸ್ನಲ್ಲಿ ಮೂವರನ್ನು ಬಂಧಿಸಲಾಗಿದೆ. ಅಲ್ಲದೆ ಇತ್ತೀಚೆಗೆ ಅಪರಿಚಿತ ವ್ಯಕ್ತಿಗಳು ಕೇಸ್ ವಾಪಸ್ ತಗೊಳ್ಳಿ ಅಂತ ಹಣದ ಆಮಿಷ ಒಡ್ಡುತ್ತಿದ್ದಾರೆ ಅಂತ ಸಂತ್ರಸ್ಥೆ ಆರೋಪಿಸಿದ್ರು. ಇನ್ನು ರಾಜ್ಯ ಮಹಿಳಾ ಆಯೋಗ ಕೂಡ ಈ ವಿಚಾರವಾಗಿ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
-masthmagaa.com
Contact Us for Advertisement