masthmagaa.com:
ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಇಲ್ಲ, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡೊವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮುಖ್ಯಮಂತ್ರಿ , ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ಮತ್ತು ಬಿಜೆಪಿ ರಾಜ್ಯಾಧ್ಯಕ್ಷರೆಲ್ಲರೂ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗೋವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ಬೇಕಾದ್ರು ತ್ಯಾಗ ಮಾಡ್ತೇನೆ ಅಂತ ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಅನ್ನೋ ಅರ್ಥದಲ್ಲಿ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇನ್ನು ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಬರಲ್ಲ ಅಂತ ಯತ್ನಾಳ್ ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. ಇದೇ ವೇಳೆ ಪಂಚರಾಜ್ಯಗಳ ಎಲೆಕ್ಷನ್ ರಿಸಲ್ಟ್ ಬಗ್ಗೆ ರಿಯಾಕ್ಟ್ ಮಾಡಿ, ನರೇಂದ್ರ ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ. ನರೇಂದ್ರ ಮೋದಿ ದೇಶಕ್ಕೆ ಗ್ಯಾರಂಟಿ ಇರುವುದಿಂದ ಗೆಲುವಾಗಿದೆ. ಕುಟುಂಬ ರಾಜಕಾರಣ ಕಿತ್ತು ಹಾಕಬೇಕು. ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ. ವಂಶವಾದವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ ಅಂತ ಯತ್ನಾಳ್ ಹೇಳಿದ್ದಾರೆ.
-masthmagaa.com
Contact Us for Advertisement