ನಾವು ಬಿಜೆಪಿ ಜೊತೆ ಹೋಗಲ್ಲ: ಸಿಎಂ ಇಬ್ರಾಹಿಂ

masthmagaa.com:

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಅಸಮಾಧಾನಗೊಂಡಿರುವ ಜೆಡಿಎಸ್‌ ರಾಜ್ಯಧ್ಯಕ್ಷ ಸಿಎಂ.ಇಬ್ರಾಹಿಂ ಅವರು ನಾವು ಬಿಜೆಪಿ ಜೊತೆ ಹೋಗಲ್ಲ ಅಂತ ಹೇಳಿದ್ದಾರೆ. ಇಂದು ನಡೆದ ಜೆಡಿಎಸ್‌ ಚಿಂತನ ಮಂಥನ ಸಭೆ ಬಳಿಕ ಮಾತಾಡಿರುವ ಇಬ್ರಾಹಿಂ, ನಮ್ಮದು ಜಾತ್ಯಾತೀತ ಜೆಡಿಎಸ್, ನಮ್ಮ ಪಕ್ಷದಿಂದ ಬಿಜೆಪಿ ಜೊತೆಗೆ ಮೈತ್ರಿಗೆ ಒಪ್ಪಿಗೆ ಇಲ್ಲ. ಪ್ರತಿಯೊಬ್ಬ ಶಾಸಕರ ಜೊತೆ ಮಾತಾಡ್ತೀನಿ. ಇದರ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ತಿಳಿಸುತ್ತೀವಿ. ನೀವು ಯಾವುದೇ ಕಾರಣಕ್ಕೂ ಮೈತ್ರಿಗೆ ಒಪ್ಪಿಗೆ ಕೊಡಬಾರದು ಅಂತ ಮನವಿ ಮಾಡ್ತೀವಿ. ಇವತ್ತೇ ಕೋರ್ ಕಮಿಟಿ ಮಾಡ್ತೀನಿ ಅಂತ ಹೇಳಿದ್ದಾರೆ. ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ. ಬಿಜೆಪಿ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವನ್ನ ಸೋಲಿಸಬೇಕು. ಈ ನಿಟ್ಟಿನಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಅಂತ ಹೇಳಿದ್ದಾರೆ. ಜೊತೆಗೆ ನಾನು ಪಕ್ಷದ ಅಧ್ಯಕ್ಷ, ನನ್ನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಪಕ್ಷ ಕುಟುಂಬದ ಸ್ವತ್ತಲ್ಲ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply