masthmagaa.com:
ಯಾವುದೇ ಕಾರಣಕ್ಕೂ ನಾವು ಭ್ರಷ್ಟಾಚಾರವನ್ನ ಸಹಿಸೋದಿಲ್ಲ. ಬಿಬಿಎಂಪಿಯನ್ನು ಭ್ರಷ್ಟಾಚಾರ ರಹಿತ ಕಾರ್ಪೊರೇಷನ್ ಆಗಿ ರೂಪಿಸಿ ಅಂತ ಬೆಂಗಳೂರು ನಗರಾಭಿವೃದ್ದಿ ಸಚಿವ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಜೊತೆಗೆ ಭ್ರಷ್ಟಚಾರವನ್ನ ಮಾಡಿ ಅನಂತರ ಬರುವ ಪರಿಣಾಮವನ್ನು ಎದುರಿಸುವ ಪ್ರಯತ್ನಕ್ಕೆ ಕೈ ಹಾಕಬೇಡಿ ಅಂತ ಶಿವಕುಮಾರ್ ಹೇಳಿದ್ದಾರೆ. ಮುಂದುವರೆದು ಮಾತನಾಡಿ, ನಾನು ಗ್ರಾಮೀಣ ಕ್ಷೇತ್ರದ ರಾಜಕಾರಣಿಯಾದರೂ ಓದಿದ್ದು ನಗರದಲ್ಲಿಯೇ. ಹೀಗಾಗಿ ಮುಖ್ಯಮಂತ್ರಿಯವರು ನಗರದ ಖಾತೆಗಳನ್ನು ನಿಭಾಯಿಸುವ ಟಾಸ್ಕ್ ನೀಡಿದ್ದಾರೆ. ಅದನ್ನು ನಿಭಾಯಿಸ್ತೀನಿ ಅಂತ ಹೇಳಿದ್ದಾರೆ.
-masthmagaa.com
Contact Us for Advertisement