masthmagaa.com:
ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೀರನೂರು ಎಂಬಲ್ಲಿ ಅತಿಹೆಚ್ಚು 244 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ಸಾಧರಣ, ಇನ್ನುಳಿದ ಕಡೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ, ಇನ್ನೂ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗುವ ಸಾದ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಚಿಕ್ಕಮಗಳೂರು ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
-masthmagaa.com
Contact Us for Advertisement