ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದಲ್ಲಿ ಹಲವು ಕಡೆ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಕಾಯ್ಕಿಣಿ ಎಂಬಲ್ಲಿ ಅತಿಹೆಚ್ಚು 168.5 ಮಿಲಿಮೀಟರ್‌ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಧರಣ ಮಳೆ, ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿ ತೀರದಲ್ಲಿ ಗಂಟೆಗೆ 40ರಿಂದ 45 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ದೇಶದ ಪೂರ್ವ ಭಾಗಗಳಾದ ಬಿಹಾರ, ಪಶ್ಚಿಮ ಬಂಗಾಳದ ಹಲವೆಡೆ ಮುಂದಿನ ಕೆಲ ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಅಂತ ಹವಾಮಾನ ಇಲಾಖೆ ಹೇಳಿದೆ.. ಇತ್ತ ತೆಲಂಗಾಣ ಮತ್ತು ತಮಿಳುನಾಡಿನಲ್ಲೂ ಮಳೆ ಮುಂದುವರಿಯಲಿದೆ.

-masthmagaa.com

Contact Us for Advertisement

Leave a Reply