ಇವತ್ತು ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ಬೆಂಗಳೂರಿನಲ್ಲಿ ಮಾತ್ರವಲ್ಲದೇ ರಾಜ್ಯದ ಹಲವು ಕಡೆ ವರುಣ ಅಬ್ಬರಿಸಿದ್ದಾನೆ. ಕಳೆದ 24 ಗಂಟೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ DK ಹಳ್ಳಿ ಎಂಬಲ್ಲಿ ಅತಿಹೆಚ್ಚು ಅಂದ್ರೆ 188 ಮಿಲಿಮೀಟರ್‌ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು,ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧರಣ ಮಳೆ, ಅಲ್ಲಲ್ಲಿ ಗುಡುಗು ಸಹಿತ ಅಬ್ಬರದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ್ಯಂತ ಬಹುತೇಕ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಭಾರಿ ಅವಾಂತರವನ್ನೇ ಸೃಷ್ಠಿಸಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

-masthmagaa.com

Contact Us for Advertisement

Leave a Reply