masthmagaa.com:
ರಾಜ್ಯದಲ್ಲಿ ಎಡೆಬಿಡದೇ ಸುರೀತಿರೋ ಮಹಾಮಳೆ ಇಂದೂ ನಿಧಾನವಾಗಿಲ್ಲ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗೊಂಬೆ ಎಂಬಲ್ಲಿ ಅತಿಹೆಚು ಅಂದ್ರೆ 265.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಅಬ್ಬರದ ಮಳೆಯಾಗಲಿದೆ. ಇನ್ನುಳಿದ ಕೆಲವು ಕಡೆ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ. ಇನ್ನು ಉತ್ತರ ಮತ್ತು ದಕ್ಷಿಣ ಒಳನಾಡಿನನಲ್ಲಿ ಕೆಲವು ಕಡೆ ಅಧಿಕ ಇನ್ನು ಕೆಲವು ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಾಮರಾಜನಗರ, ಮೈಸೂರು, ದಾವಣಗೆರೆ,ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಭಾರೀ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನ ಪರಿಹರಿಸೋಕೆ ಅಗತ್ಯ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಅಂತ ಮೂಲಗಳು ತಿಳಿಸಿವೆ.
-masthmagaa.com
Contact Us for Advertisement