masthmagaa.com:
ರಾಜ್ಯದಲ್ಲಿ ಇವತ್ತೂ ಜಡಿ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಹಾಸನ ಜಿಲ್ಲೆಯ ಹೆಗ್ಗದ್ದೆ ಎಂಬಲ್ಲಿ ಅತಿಹೆಚ್ಚು 198 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಅಬ್ಬರದ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳ ಕಡೆ ಕೂಡ ಕೆಲವು ಕಡೆ ಅಧಿಕ ಮಳೆ ಇನ್ನುಳಿದ ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಅಧಿಕ ಮಳೆ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಸನ, ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 65 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಂದಂತೆ ಎಚ್ಚರಿಕೆ ನೀಡಲಾಗಿದೆ.
-masthmagaa.com
Contact Us for Advertisement