masthmagaa.com:
ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ದೇವಚಳ್ಳ ಎಂಬಲ್ಲಿ ಅತಿಹೆಚ್ಚು ಅಂದ್ರೆ 86.5 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅಧಿಕ ಮಳೆ..ಉಳಿದೆಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ. ಅಲ್ಲಲ್ಲಿ ಕಡಿಮೆ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಯಾವ ಜಿಲ್ಲೆಗಳಿಗೂ ಮುಂದಿನ 24 ಗಂಟೆಗಳಿಗೆ ಅನ್ವಯ ಆಗುವಂತೆ ಯಾವುದೇ ಅಲರ್ಟ್ನ್ನ ಘೋಷಣೆ ಮಾಡಿಲ್ಲ.
-masthmagaa.com
Contact Us for Advertisement