masthmagaa.com:
ಜೂನ್ 7ರಿಂದ 11ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇಂಗ್ಲೆಂಡ್ನ ಓವಲ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಪ್ರತಿಷ್ಠಿತ ಕಪ್ಗಾಗಿ ಸೆಣಸಾಡಲಿವೆ. ಈ ಹಿನ್ನೆಲೆ BCCI ಇಂದು ಭಾರತ ತಂಡವನ್ನ ಪ್ರಕಟಿಸಿದೆ. ತಂಡದಲ್ಲಿ ನಂಬರ್ 1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ರನ್ನ ಕೈಬಿಡಲಾಗಿದೆ. ಇದೇ ವೇಳೆ IPLನಲ್ಲಿ CSK ಪರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆ ಭಾರತ ತಂಡಕ್ಕೆ ವಾಪಾಸ್ಸಾಗಿದ್ದಾರೆ. ಆಲ್ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಭಾರತ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ. ಇವರಿಬ್ಬರನ್ನ ಹೊರತುಪಡಿಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದಿದ್ದ ತಂಡವನ್ನೆ ಉಳಿಸಿಕೊಳ್ಳಲಾಗಿದೆ.
-masthmagaa.com
Contact Us for Advertisement