ಕನ್ನಡ ನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದಲ್ಲಿ ಪುಣ್ಯ ಮಾಡಿರಬೇಕು: ಸಿಎಂ

masthmagaa.com:

ಮೊದಲಿಗೆ ವಿಶ್ವದ ಎಲ್ಲ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು. ರಾಜ್ಯ ಸೇರಿದಂತೆ ವಿಶ್ವದ ಹಲವು ಕಡೆ ಇಂದು 67ನೇ ಕನ್ನಡ ರಾಜ್ಯೋತ್ಸವವನ್ನ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದಲ್ಲಿ ಪುಣ್ಯ ಮಾಡಿರಬೇಕು. ರಾಜ್ಯದ ಏಕೀಕರಣಕ್ಕೆ ಹಲವು ಮಹನೀಯರ ಶ್ರಮ ಇದೆ. ಶಿಕ್ಷಣ ಆರೋಗ್ಯ, ಉದ್ಯೋಗ ಜೊತೆ ಭಾರತದ ಭವಿಷ್ಯವನ್ನೂ ನಿರ್ಮಾಣ ಮಾಡುವ ಶಕ್ತಿ ಕರ್ನಾಟಕಕ್ಕೆ ಇದೆ ಅಂತ ಹೇಳಿದ್ರು.

-masthmagaa.com

Contact Us for Advertisement

Leave a Reply