ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಬಂದ್ರೆ ಸ್ವಾಗತ ಮಾಡ್ತೀವಿ: ಸಿದ್ದರಾಮಯ್ಯ

masthmagaa.com:

ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಬಂದ್ರೆ ಸ್ವಾಗತ ಮಾಡ್ತೀವಿ ಅಂತ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಹಿರಿಯ ನಾಯಕರನ್ನ ಸರಿಯಾಗಿ ನಡೆಸಿಕೊಂಡಿಲ್ಲ. ಕೆಎಸ್‌ ಈಶ್ವರಪ್ಪ ಪಕ್ಷದ ಸಿದ್ಧಾಂತ ಅಂತಿದ್ರು. ಈಗ ಎಲ್ಲಿ ಹೋದ್ರು? ಲಕ್ಷ್ಮಣ್‌ ಸವದಿ ಕಾಂಗ್ರೆಸ್‌ಗೆ ಸೇರಿದ್ದರಿಂದ ಪಕ್ಷಕ್ಕೆ ಲಾಭ ಆಗಲಿದೆ. ಸವದಿ ಕೇಳಿದ ಕಡೆ ಪ್ರಚಾರದ ಜವಾಬ್ದಾರಿ ಕೊಡ್ತೀವಿ. ಇದೇ ವೇಳೆ ಶೆಟ್ಟರ್‌ ಪಕ್ಷ ಸೇರೋದಕ್ಕೆ ಸ್ವಾಗತವಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply