ಏಪ್ರಿಲ್‌ 28ಕ್ಕೆ ಉ.ಕರ್ನಾಟಕಕ್ಕೆ PM! ಗೆದ್ದು ಬಿಜೆಪಿ ಸೇರ್ತಿನಿ:ಈಶ್ವರಪ್ಪ

masthmagaa.com:

ಲೋಕಸಭೆ ಚುನಾವಣೆ ಸಂಬಂಧ ಪ್ರಧಾನಿ ಮೋದಿ ಏಪ್ರಿಲ್‌ 28 ಹಾಗೂ 29ರಂದು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆ, ಕಾರವಾರ, ಬೆಳಗಾವಿ, ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ ಮಾಡಲಿದ್ದಾರೆ.

ಮತ್ತೊಂದು ಕಡೆ ಬಿಜೆಪಿಯಿಂದ ಆಯ್ಕೆಯಾಗಿದ್ದ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದ ಹಿನ್ನಲೆ ಈ ನಿರ್ಧಾರ ಕೈಗೊಂಡಿದ್ದು, ಕಾಂಗ್ರೆಸ್‌ ಸೇರೊದಾಗಿ ತಿಳಿಸಿದ್ದಾರೆ.

ಇತ್ತ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಂಕಾ ಗಾಂಧಿ ವಾದ್ರಾ ತಮ್ಮ ಅಭ್ಯರ್ಥಿಗಳ ಪ್ರಚಾರ ಮಾಡಿದ್ದಾರೆ. ಆ ಕಡೆ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರೊ ಮಾಜಿ DCM ಕೆ.ಎಸ್‌.ಈಶ್ವರಪ್ಪರನ್ನ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಮಾಡಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಅಪ್ಪ-ಮಕ್ಕಳ ಕುತಂತ್ರದಿಂದ ನನ್ನ ಉಚ್ಛಾಟನೆಯಾಗಿದೆ. ಆದ್ರೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಅಂತೇಳಿದ್ದಾರೆ. ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರೊ ಮಾಜಿ ಸಿಎಂ ಯಡಿಯೂರಪ್ಪ, ಈಶ್ವರಪ್ಪನವ್ರು ಅಪೇಕ್ಷೆಯಂತೆ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಇದ್ರಲ್ಲಿ ನಮ್ಮ ಪಾತ್ರವೇನು ಇಲ್ಲ ಅಂತೇಳಿದ್ದಾರೆ.

-masthmagaa.com

Contact Us for Advertisement

Leave a Reply