ಕಾಂಗ್ರೆಸ್‌ ಸೇರುವ ಬದಲು ಬಾವಿಹೆ ಹಾರುತ್ತೇನೆ: ನಿತಿನ್‌ ಗಡ್ಕರಿ

masthmagaa.com:

ಕಾಂಗ್ರೆಸ್‌ ಪಕ್ಷಕ್ಕೆ ಸೇರುವಂತೆ ನನಗೆ ನಾಯರೊಬ್ಬರು ಆಫರ್‌ ನೀಡಿದ್ರು. ಆ ಪಕ್ಷದ ಸದಸ್ಯ ಆಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದೇ ಒಳ್ಳೆಯದು ಅಂತ ಹೇಳಿ ಆಫರನ್ನ ತಿರಸ್ಕರಿಸಿದ್ದೆ ಅಂತ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಮೋದಿ ಸರ್ಕಾರ 9 ವರ್ಷಗಳನ್ನ ಪೂರೈಸಿದ ಹಿನ್ನೆಲೆ ಮಹಾರಾಷ್ಟ್ರದ ಭಂಡಾರಾದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡುವ ಟೈಮಲ್ಲಿ ಈ ರೀತಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಿದ ಕೆಲಸಗಳಿಗೆ ಹೋಲಿಸಿದರೆ ಕಳೆದ 9 ವರ್ಷಗಳಲ್ಲಿ ಬಿಜೆಪಿ ಸರ್ಕಾರ ದೇಶದಲ್ಲಿ ಎರಡು ಪಟ್ಟು ಕೆಲಸ ಮಾಡಿದೆ ಎಂದಿದಾರೆ. ಇದೇ ವೇಳೆ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದು, ದಿವಂಗತ ಕಾಂಗ್ರೆಸ್ ನಾಯಕ ಶ್ರೀಕಾಂತ್ ಜಿಚ್ಕರ್ ಒಮ್ಮೆ ನೀವು ಕಾಂಗ್ರೆಸ್ ಸೇರಿದರೆ, ನಿಮಗೆ ಉಜ್ವಲ ಭವಿಷ್ಯವಿದೆ ಎಂದಿದ್ದರು. ಅದಕ್ಕೆ ನಾನು ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರುತ್ತೇನೆ ಅಂತ ಹೇಳಿದ್ದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply