ಎಲ್ಲವೂ ಒಟ್ಟೊಟ್ಟಿಗೆ ಬಂದಿವೆ…ಕೊರೋನಾ ತಡೆಯದಿದ್ರೆ ಕಷ್ಟ: ಯಡಿಯೂರಪ್ಪ

masthmagaa.com:

ಬೆಂಗಳೂರು: ಕೊರೋನಾ ವೈರಸ್ ಮಿತಿ ಮೀರಿದ್ರೆ ನಿಯಂತ್ರಿಸೋದು ತುಂಬಾ ಕಷ್ಟ ಅಂತ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಕ್ಕಿ ಜ್ವರ, ಹೆಚ್​​1ಎನ್​​1, ಕೊರೋನಾ ವೈರಸ್ ಎಲ್ಲವೂ ಒಟ್ಟೊಟ್ಟಿಗೆ ಬಂದಿದೆ. ಜನರ ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸುತ್ತೇವೆ ಎಂದಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಹಕ್ಕಿಜ್ವರ ಕಂಡು ಬಂದಿರೋ ಹಿನ್ನೆಲೆಯಲ್ಲಿ ಸೋಮಣ್ಣ ಅವರನ್ನು ಕಳುಹಿಸಿದ್ದೇವೆ. ಅವರು ಮೈಸೂರಿನಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ನೋಡಿಕೊಳ್ತಿದ್ದಾರೆ ಅಂತ ಸದನಕ್ಕೆ ಯಡಿಯೂರಪ್ಪ ಮಾಹಿತಿ ನೀಡಿದ್ರು.

-masthmagaa.com

Contact Us for Advertisement

Leave a Reply