ಹಿಂದು, ಮುಸ್ಲಿಂ, ಕ್ರಿಶ್ಚಿಯನ್..ಯಾರೇ ಆಗಲಿ..ಸುಮ್ನೆ ಬಿಡಲ್ಲ: ಬಿಎಸ್​​ವೈ ಕೆಂಡ

masthmagaa.com:

ಬೆಂಗಳೂರು: ತಪ್ಪು ಮಾಡಿದವರು ಯಾರೇ ಆಗಿರಲಿ… ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಿದ್ರೂ ಕಾನೂನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು ಖಂಡನಾರ್ಹ.. ಈ ಬಗ್ಗೆ ರಾತ್ರಿಯಿಡೀ ಚರ್ಚೆ ನಡೆಸಿದ್ದೇವೆ. ಗೃಹ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಿದ್ದಾರೆ. ನಾವು ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದೇವೆ. ಆದ್ರೆ ಅದನ್ನು ಅರ್ಥ ಮಾಡಿಕೊಳ್ಳದೆ ಕೆಲವು ದುಷ್ಕರ್ಮಿಗಳು ಗೂಂಡಾಗಿರಿ ನಡೆಸಿದ್ದಾರೆ. ಈಗಾಗಲೇ 54 ಮಂದಿಯನ್ನು ಅರೆಸ್ಟ್ ಕೂಡ ಮಾಡಿದ್ದೇವೆ. ರಾಜ್ಯದಲ್ಲಿ ಇಂಥಹ ಘಟನೆಗಳು ಈವರೆಗೆ ನಡೆದಿರಲಿಲ್ಲ. ಕಾನೂನು ಕೈಗೆ ತೆಗೆದುಕೊಂಡು ಗೂಂಡಾಗಿರಿ ನಡೆಸೋದನ್ನು ಸಹಿಸಲು ಸಾಧ್ಯವೇ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದ್ರು.

-masthmagaa.com

Contact Us for Advertisement

Leave a Reply