masthmagaa.com:
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನ ಮರಳಿ ಪಡೆಯಲು ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಮುಂತಾದ ಪಕ್ಷಗಳು ರಚಿಸಿಕೊಂಡಿರುವ ‘ಗುಪ್ಕರ್’ ಮೈತ್ರಿಕೂಟಕ್ಕೆ ಕಾಂಗ್ರೆಸ್ ಬೆಂಬಲ ನೀಡ್ತಿರೋದಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ನ ಡಬಲ್ ಸ್ಟಾಂಡರ್ಡ್ ಬಯಲಾಗಿದೆ. ಉಗ್ರವಾದ ಮತ್ತು ಪ್ರತ್ಯೇಕತಾವಾದದಲ್ಲಿ ಭಾಗಿಯಾಗಿರುವವರಿಗೆ ಕಾಂಗ್ರೆಸ್ ಬೆಂಬಲ ನೀಡುವ ಮೂಲಕ ದೇಶದ ಏಕತೆ ಮತ್ತು ಸಮಗ್ರತೆ ಜೊತೆಗೆ ಆಟವಾಡುತ್ತಿದೆ. ಒಂದು ಭಾರತ, ಶ್ರೇಷ್ಠ ಭಾರತ ಎಂಬ ಪರಿಕಲ್ಪನೆ ನಿಜವಾಗಲು ಕಾಂಗ್ರೆಸ್ ಬಿಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ದೆಹಲಿಯಲ್ಲಿ ಒಂದು ಮಾತಾಡಿದ್ರೆ ಮತ್ತು ಕಾಶ್ಮೀರದಲ್ಲಿ ಮತ್ತೊಂದು ಮಾಡ್ತಿದೆ ಅನ್ನೋದಕ್ಕೆ ಗುಪ್ಕರ್ ಸಭೆಗಳಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿರೋದೇ ಸಾಕ್ಷಿ. ಹೀಗಾಗಿ ಗುಪ್ಕರ್ ಮೈತ್ರಿಕೂಟದ ಬಗ್ಗೆ ತನ್ನ ನಿಲುವನ್ನ ಕಾಂಗ್ರೆಸ್ ಸ್ಪಷ್ಟಪಡಿಸಬೇಕು’ ಅಂತ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
-masthmagaa.com
Contact Us for Advertisement